ಇನ್ನು ಮುಂದೆ ಶಾಲೆಗಳಲ್ಲಿ ಕೃಷಿಯೂ ಕೂಡ ಪಠ್ಯಕ್ರಮದ ಒಂದು ಭಾಗವಾಗಲಿದೆ .
Agricultural Education ಶಾಲಾ ಮಕ್ಕಳಿಗೆ ಯಾವ ವಿಷಯವನ್ನು ಕಲಿಸಬೇಕು, ಮಕ್ಕಳನ್ನು ಯಾವ ವಿಧಾನದಲ್ಲಿ ಬೆಳೆಸಬೇಕು ಎನ್ನುವುದು ತುಂಬಾ ಮುಖ್ಯ. ಏಕೆಂದರೆ ಇಂದಿನ ಮಕ್ಕಳೇ ನಾಳಿನ ಭವಿಷ್ಯವನ್ನು ರೂಪಿಸುವ ವ್ಯಕ್ತಿಗಳಾಗಿದ್ದು, ಈ ಕಾರಣದಿಂದ ಒಂದು ಹೊಸ ವಿಷಯವನ್ನು ಶಾಲೆಗಳಲ್ಲಿ ಮಕ್ಕಳಿಗೆ ಪರಿಚಯಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೌದು, ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಹಮ್ಮಿಕೊಂಡಿದ್ದ ‘ನೈಸರ್ಗಿಕ ಕೃಷಿ ರಾಷ್ಟ್ರೀಯ ಕಾರ್ಯಾಗಾರ’ ದಲ್ಲಿ ಮಾತನಾಡಿದ ನರೇಂದ್ರ ಸಿಂಗ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
“ಭಾರತದ ಜನಸಂಖ್ಯೆಗೆ ಹೋಲಿಸಿದರೆ, ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಿದ್ದು, ಜನರು ಆಹಾರ ಧಾನ್ಯಗಳ ಕೊರತೆಯನ್ನು ಹಲವು ಭಾರಿ ಅನುಭವಿಸಿದ್ದಾರೆ. ಇನ್ನು ಮುಂದೆ ಅಂತಹ ಸಂದರ್ಭ ತಲೆದೋರಬಾರದು ಎನ್ನುವ ಕಾರಣಕ್ಕೆ ಮಕ್ಕಳಿಗೆ ಕೃಷಿಯ ಮಹತ್ವ ತಿಳಿಸಬೇಕು” ಎಂದು ಅವರು ಹೇಳಿದರು.
“ಆರೋಗ್ಯಪೂರ್ಣ ಮನಸ್ಸು ಹಾಗೂ ದೇಹಕ್ಕಾಗಿ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಇದಕ್ಕಾಗಿ ನಾವು ಆರೋಗ್ಯಕರ ಕೃಷಿ ಪದ್ಧತಿ ಹಾಗೂ ಆರೋಗ್ಯಕರ ಮಾನವ ತತ್ವಗಳನ್ನು ಅನುಸರಿಸಬೇಕು. ಹಾಗಾಗಿ ನೈಸರ್ಗಿಕ ಕೃಷಿಯತ್ತ ನಾವು ಸಾಗಬೇಕು.
ಕೃಷಿಯಲ್ಲಿ ಜಾನುವಾರುಗಳ ಪಾತ್ರದ ಬಗ್ಗೆಯೂ ಮಾಹಿತಿ ನೀಡಬೇಕು. ಏಕೆಂದರೆ ಕೃಷಿಯಲ್ಲಿ ಜಾನುವಾರಗಳ ಪಾತ್ರ ಅತೀ ಮುಖ್ಯವಾಗಿರುತ್ತದೆ. ಕೃಷಿ ಮಾಡುವುದರಿಂದ ಭೂಮಿಯ ಫಲವತ್ತತೆ ಕೂಡಾ ಹೆಚ್ಚುತ್ತದೆ, ಹಾಗಾಗಿ ನೈಸರ್ಗಿಕ ಕೃಷಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದು ಬಹಳ ಮುಖ್ಯವಾಗಿರುತ್ತದೆ. ಎಲ್ಲರೂ ಕೈಗಾರಿಕೆಯತ್ತ ಒಲವು ತೋರಿದರೆ ಭೂಮಿ ಹಾಳಾಗುತ್ತದೆ ಎನ್ನುವ ಅರಿವು ನಮಗಿರಬೇಕು. ಉದಾಹರಣೆಗೆ, ಈಗಾಗಲೇ ಗುಜರಾತ್ನ ಡ್ಯಾಂಗ್ ಜಿಲ್ಲೆಯಲ್ಲಿ 100% ನಷ್ಟು ನೈಸರ್ಗಿಕ ಕೃಷಿ ಮಾಡಲಾಗುತ್ತಿದೆ. ಅದೇ ರೀತಿ, ಹಿಮಾಚಲ ಪ್ರದೇಶದ ರೈತರು ಸಹ ನೈಸರ್ಗಿಕ ಕೃಷಿ ಮಾಡುವ ನಿಟ್ಟಿನಲ್ಲಿ ತೊಡಗಿಕೊಂಡಿದ್ದಾರೆ. ಇದನ್ನು ದೇಶದ ಪ್ರತೀ ರೈತರು ಅಳವಡಿಸಿಕೊಳ್ಳಬೇಕು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ… ಕೇವಲ ಒಂದು ಎಕರೆ ಜಾಗದಲ್ಲಿ ಸುಮಾರು 8 ಲಕ್ಷ ಆದಾಯ ತೆಗೆಯುವ ರೈತ ಚಾಬೂ ಸಾಬ್
ಇದೆ ತರಹದ ಕೃಷಿಗೆ ಸಂಬಂಧ ಪಟ್ಟಂತಹ ಮತ್ತಷ್ಟು ಮಾಹಿತಿಗಾಗಿ ನಮ್ಮ ನೇಗಿಲ ಯೋಗಿ ಅಪ್ ಡೌನ್ಲೋಡ್ ಮಾಡಿ.
ಮತ್ತು ಕೃಷಿ ಗೆ ಸಂಬಂಧಿಸಿದಂತಹ ಎಲ್ಲ ಬಗೆಯ ಮಹಿತಿಯನ್ನ ತಕ್ಷಣಕ್ಕೆ ನಿಮ್ಮ ಮೊಬೈಲ್ ನಲ್ಲಿಯೇ ಪಡೆದುಕೊಳ್ಳಿ